ಬಾಯೊಳಗಿಹಳ ಗ೦ಡನ ನಿಜ ತಮ್ಮನ
ತಾಯ ಪಿತನ ಮಡದಿಯ ಧರಿಸಿದನ
ಸ್ತ್ರೀಯಳ ಸುತನ ಕೈಯಲಿ ಶಾಪ ಪಡೆದನ
ದಾಯಾದ್ಯನ ಮಗನ
ಸಾಯಕವದು ತೀವ್ರದಿ ಬರುತಿರೆ ಕ೦ಡು
ಮಾಯಾಪತಿ ಭೂಮಿಯನೊತ್ತಿ ತನ್ನಯ
ಬೀಯಗಾರನ ತಲೆಗಾಯಿದ೦ಥರಾಯನ ಕ ರೆ ದು ತೋರೆ ರಮಣಿ ||೨||
ಬಾಯಲ್ಲಿರುವ ಸರಸ್ವತಿಯ ಗ೦ಡ , ಬ್ರಹ್ಮನ ,ತಮ್ಮ ,ಮನ್ಮಥನ , ತಾಯಿ , ಲ಼ಕ್ಷ್ಮಿಯ , ಪಿತನಾದ ಸಮುದ್ರ ರಾಜನ , ಮಡದಿ ಗ೦ಗೆಯನ್ನು , ಧರಿಸಿದ ಶಿವನ ,. ಸತಿ ಪಾರ್ವತಿಯ , ಮಗ ಗಣಪತಿಯಿ೦ದ , ಶಾಪ ಪಡೆದ ಚ೦ದ್ರನ , ದಾಯಾದಿ ಸೂರ್ಯನ , ಮಗ ಕರ್ಣನ , ಸರ್ಪಾಸ್ತ್ರವು ತೀವ್ರವಾಗಿ ಬರುತ್ತಿರಲು ಕ೦ಡು ಭೂಮಿಯನ್ನೊತ್ತಿತ ನ್ನ ತ೦ಗಿಯ ,ಗ೦ಡ ಅರ್ಜುನನ , . ತಲೆಗಾಯ್ದ ಕೃಷ್ಣನನ್ನು , ಕರೆದು ತೋರಿಸೆ ರಮಣಿ..
ನೋಡಿದಿರಾ, , ಇಲ್ಲಿ ಕವಿಯು ಜನಜೀವನದಲ್ಲಿಃ ಹಾಸುಹೊಕ್ಕಾದ
ವಾವೆಯನ್ನು ತನ್ನ ಕಾವ್ಯದಲ್ಲಿ ಎಷ್ಟು ಚಮತ್ಕಾರವಾಗಿ ಬಳಸಿದ್ದಾನೆ
No comments:
Post a Comment
Note: Only a member of this blog may post a comment.